ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ತಾಲ್ಲೂಕು ಪಂಚಾಯ್ತಿ ಸದಸ್ಯ ಸುಭಾಷ ನಿಂಗಪ್ಪ ದೇಸಾಯಿ ನಿಧನ

Last Updated 24 ಡಿಸೆಂಬರ್ 2017, 7:13 IST
ಅಕ್ಷರ ಗಾತ್ರ

ಧಾರವಾಡ: ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಸುಭಾಷ ನಿಂಗಪ್ಪ ದೇಸಾಯಿ (60) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾದರು. 

ಅವರಿಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

ಇಂದು ಮಧ್ಯಾಹ್ನ 2ಕ್ಕೆ ಗ್ರಾಮದ ರುದ್ರಭೂಮಿಯಲ್ಲಿ ಜೈನ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಸುಭಾಷ ಅವರು ಧಾರವಾಡ ತಾಲೂಕಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಒಂದು ಬಾರಿಗೆ ಮಂಡಳ ಪಂಚಾಯ್ತಿ ಸದಸ್ಯರಾಗಿ, ಒಂದು ಅವಧಿಗೆ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಪ್ರಸ್ತುತ ಧಾರವಾಡ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿದ್ದರು. ಸತತ ಮೂರು ಬಾರಿ ಅಮ್ಮಿನಭಾವಿ ಕ್ಷೇತ್ರವನ್ನು ಪ್ರತಿನಿಧಿಸಿ ಮೂರೂ ಭಾರಿಗೆ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT