ನಂತರ ರಥಕ್ಕೆ 3 ಬಾರಿ ಪ್ರದಕ್ಷಿಣೆ ಹಾಕಿದ ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ನೆರೆದ ಭಕ್ತಸಮೂಹ ಸ್ವಾಮಿಗೆ ಜಯವಾಗಲಿ ಎಂದು ಜಯಘೋಷ ಕೂಗುತ್ತ ರಥವನ್ನು ಎಳೆದರು. ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿಗಳನ್ನು ತೂರಿ ತಮ್ಮ ಭಕ್ತಿಭಾವವನ್ನು ಮೆರೆದರು. ವಿವಿಧ ಬಣ್ಣದ ಬಟ್ಟೆ, ಧ್ವಜ, ಹೂವಿನ ಹಾರಗಳಿಂದ ಸ್ವಾಮಿಯ ರಥವನ್ನು ಅಲಂಕೃತಗೊಳಿಸಲಾಗಿತ್ತು.