ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬಗರ್ ಹುಕುಂ ಮತ್ತು ಅರಣ್ಯ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮುಂದುವರಿದಿದೆ. ಸಾಗುವಳಿದಾರರು ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ತಮ್ಮ ಎತ್ತುಗಳನ್ನು ತಂದು ಕಟ್ಟಿ, ಮೇವು ಹಾಕಿ, ತಮಟೆ ಬಾರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದರು.