‘ಇನ್ನಾದರೂ ನಮ್ಮ ಮನವಿಗೆ ಸ್ಪಂದಿಸುವ ಮೂಲಕ ರಾಷ್ಟ್ರಪತಿ ಅವರು ಒಪ್ಪಿಗೆ ನೀಡಬೇಕು’ ಎಂದು ನೌಕರರು ಇದೇ ಸಂದರ್ಭದಲ್ಲಿ ಕೋರಿದರು. ಒಕ್ಕೂಟದ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಕೆ.ಕೆ.ಕಮಾನಿ, ಡಿಡಿಪಿಐ ಎಂ.ರೇವಣಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಶಿಕ್ಷಣ ಇಲಾಖೆ, ಕಂದಾಯ, ನಗರಸಭೆ, ವಿವಿಧ ಇಲಾಖೆಗಳ ಎಸ್ಸಿ, ಎಸ್ಟಿ ನೌಕರರು ಇದ್ದರು.