ಕೊರಟಗೆರೆ: ಪರಿಶಿಷ್ಟ ಜಾತಿಗೆ ಸೇರಿದ ನೂರು ಒಳಪಂಗಡಗಳು ಒಗ್ಗೂಡಿ ಡಿ. 29ರಂದು ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ದಲಿತ ಮುಖಂಡ ದಾಡಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಒಳಮೀಸಲಾತಿ ಜಾರಿಗಾಗಿ ಜಾಗೃತಿ ಕೂಟದಲ್ಲಿ ಮಾತನಾಡಿದರು. ತುಮಕೂರಿನಲ್ಲಿ ಮಾದಿಗ ಮೀಸಲಾತಿ ಸಮಿತಿ ಡಿ. 28ರಿಂದ ಆಯೋಜಿಸಿರುವ ರಾಜ್ಯಮಟ್ಟದ ಅಹೋರಾತ್ರಿ ಧರಣಿಗೆ ಮಾದಿಗ ಮಾನವ ಹಕ್ಕುಗಳ ವೇದಿಕೆ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟ ಬೆಂಬಲ ಸೂಚಿಸುತ್ತದೆ ಎಂದು ತಿಳಿಸಿದರು.