ಮಹದಾಯಿ ನೀರಿಗಾಗಿ ವರ್ಷಗಳಿಂದ ಹೋರಾಡುತ್ತಿರುವ ರೈತರು ಬೆಂಗಳೂರಿಗೆ ಬಂದು ಪ್ರತಿಭಟನೆ ನಡೆಸಿ, ಕೊರೆವ ಚಳಿಯಲ್ಲಿ ಗಡಗಡ ನಡುಗಿ, ಸೋತು ಸುಣ್ಣವಾಗಿ, ಬಂದ ದಾರಿಗೆ ಸುಂಕವಿಲ್ಲದೆ ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ. ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಅವರ ಬವಣೆ ನೀಗಿಸುವ ಭರವಸೆ ನೀಡದೆ, ಉರಿಯುವ ಮನೆಯಲ್ಲಿ ಚಳಿ ಕಾಯಿಸುತ್ತಿವೆ. ಪಕ್ಷಗಳು ಮುಂಬರುವ ಚುನಾವಣೆಯಲ್ಲಿ ತಮ್ಮ ಬಲಾಬಲ ಲೆಕ್ಕಾಚಾರದಲ್ಲಿ ತೊಡಗಿ, ಪರಿವರ್ತನಾ ಸಭೆ, ಜನಸಂಪರ್ಕ ಸಭೆ, ಗ್ರಾಮವಾಸ್ತವ್ಯ ಮುಂತಾದ ಗಿಮಿಕ್ ನಡೆಸುತ್ತಿವೆ.