ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕಿ ಮಂಜುಳಾ ಕಾಪಸೆ ಮನೆ ಮುಂದೆ ವಾಮಾಚಾರ !

Last Updated 28 ಡಿಸೆಂಬರ್ 2017, 5:46 IST
ಅಕ್ಷರ ಗಾತ್ರ

ಖಾನಾಪುರ: ‘ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲ ಕಿಡಿಗೇಡಿಗಳು ಸೋಮವಾರ ರಾತ್ರಿ ತಮ್ಮ ಬೀಡಿ ಗ್ರಾಮದ ಮನೆಯ ಮುಂದೆ ವಾಮಾಚಾರ ಮಾಡಿಸಿದ ವಸ್ತುಗಳನ್ನು ಇಟ್ಟುಹೋಗಿದ್ದಾರೆ’ ಎಂದು ಬಿಜೆಪಿ ನಾಯಕಿ ಮಂಜುಳಾ ಕಾಪಸೆ ಆರೋಪಿಸಿದ್ದಾರೆ.

ಈ ಕುರಿತು ಬುಧವಾರ 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಅವರು, ‘ಸೋಮವಾರ ಸಂಜೆ ವಿವಿಧೆಡೆ ಕ್ರಿಸ್‌ಮಸ್‌ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ 10 ಗಂಟೆಗೆ ಮನೆಗೆ ಬಂದು ಮಲಗಿದ್ದೆ. ಮರುದಿನ ಮಂಗಳವಾರ ಮುಂಜಾನೆ ಎದ್ದು ಬಾಗಿಲು ತೆರೆದಾಗ ಮನೆಯ ಮುಂಭಾಗದಲ್ಲಿ ವಾಮಾಚಾರದ ವಸ್ತುಗಳು ಕಾಣಿಸಿದವು. ಕೆಲ ದಿನಗಳ ಹಿಂದೆ ನಾನು ಹೊಸ ಕಾರು ಖರೀದಿಸಿದಾಗಲೂ ಇಂತಹ ವಸ್ತುಗಳು ಗೋಚರಿಸಿದ್ದವು’ ಎಂದು ಹೇಳಿದರು.

‘ನಾನು ಇಂತಹ ಮೂಢ ನಂಬಿಕೆ, ಗೊಡ್ಡು ಆಚರಣೆ ಮತ್ತು ಭಯ ಮೂಡಿಸುವ ಬೆದರಿಕೆಗಳಿಗೆ ಹೆದರುವುದಿಲ್ಲ. ಸಮಾಜದಲ್ಲಿ ಭಯ ಹುಟ್ಟಿಸುವ ಇಂತಹ ಕಿಡಿಗೇಡಿಗಳಿಂದ ಉಳಿದವರು ಎಚ್ಚರದಿಂದ ಇರಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT