ಡಿ. 22ರಂದು ಗಡಿ ವಿಷಯದ ಕುರಿತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಮತ್ತು ಚೀನಾದ ಸ್ಟೇಟ್ ಕೌನ್ಸಿಲರ್ ಯಾಂಗ್ ಜಿಯೆಚಿ ಮಾತುಕತೆ ನಡೆಸಿದ್ದರು. ಈ ಮಾತುಕತೆಯಲ್ಲಿ ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವ ಬಗ್ಗೆ ಒತ್ತು ನೀಡಲಾಗಿತ್ತು. ಉಭಯ ರಾಷ್ಟ್ರಗಳ ಹಿತಾಸಕ್ತಿ ದೃಷ್ಟಿಯಿಂದ ಗಡಿಯಲ್ಲಿ ಶಾಂತಿ ನೆಲೆಸಬೇಕಾಗಿದೆ. ಈ ವಿಷಯದಲ್ಲಿ ಚೀನಾದಂತೆಯೇ ಭಾರತವೂ ನಡೆದುಕೊಳ್ಳಬೇಕು ಎನ್ನುವುದು ನಮ್ಮ ಬಯಕೆ ಎಂದಿದ್ದಾರೆ.