ಈ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸುವುದಿಲ್ಲ. ಆಗಾಗ ವಿದ್ಯುತ್ ಕೈಕೊಡುತ್ತದೆ. ಇಂತಹ ಸಂದರ್ಭದಲ್ಲಿ ಬಳಸಲು ಇಡಲಾಗಿರುವ ಬ್ಯಾಟರಿಗಳು ಕೆಟ್ಟುಹೋಗಿವೆ. ಪಾಶ್ಚಾಪುರ, ಮಾವನೂರ, ಬಸ್ಸಾಪುರ, ಶಿರೂರ ಹಾಗೂ ಗೋಕಾಕ ತಾಲ್ಲೂಕಿನ ಸಾರ್ವಜನಿಕರು ಈ ಕೇಂದ್ರಕ್ಕೆ ಬೆಳಿಗ್ಗೆಯೇ ಬಂದು ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ.