ತಾಲ್ಲೂಕು ಮಟ್ಟದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿ ಮಸೀದಿ, ಮದ್ರಸ ಹಾಗೂ ದರ್ಗಾ ಪದಾಧಿಕಾರಿಗಳನ್ನು ಸೇರಿಸಿ ಇಲಾಖೆಯಿಂದ ಅವುಗಳಿಗೆ ಸಿಗಬೇಕಾದ ಸೌಲಭ್ಯಗಳ ಮಾಹಿತಿ ನೀಡಲಾಗುವುದು. ಇದರ ಭಾಗವಾಗಿ ಮುಂದಿನ ವರ್ಷ ಬಂಟ್ವಾಳ ತಾಲ್ಲೂಕಿನಿಂದ ಈ ಕಾರ್ಯಕ್ರಮ ಪ್ರಾರಂಭವಾಗಲಿರುವುದು. ಬಂಟ್ವಾಳ ಶಾಸಕ ಹಾಗೂ ಉಸ್ತುವಾರಿ ಸಚಿವ ರೈ ಅವರು ಈ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ನಜೀರ್ ಮಠ್, ಅಬೂಬಕ್ಕರ್, ಡಿ.ಎಂ. ಆಸ್ಲಮ್, ಬಾಷಾ ತಂಗಳ್, ನೂರುದ್ದೀನ್ ಸಾಲ್ಮರ ಉಪಸ್ಥಿತರಿದ್ದರು.