ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾಲಯದ ಕುಲಪತಿ ಬಿ.ಬಿ.ಕಲಿವಾಳ ಶುಕ್ರವಾರ ನಿವೃತ್ತರಾಗಿದ್ದು, ಕರ್ತವ್ಯದಿಂದ ಬಿಡುಗಡೆ ಹೊಂದಿದ್ದಾರೆ. ಶಿಕ್ಷಣ ನಿಕಾಯದ ಪ್ರೊ.ಮುರುಗಯ್ಯ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ವೀರಭದ್ರಪ್ಪ, ವಾಣಿಜ್ಯ ವಿಭಾಗದ ಪ್ರೊ.ಲಕ್ಷ್ಮಣ ಮತ್ತು ಬಯೊ ಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊ. ಗಾಯತ್ರಿ ದೇವರಾಜ್ ಸೇವಾ ಹಿರಿತನ ಹೊಂದಿದ್ದು, ಈ ನಾಲ್ವರಲ್ಲಿ ಒಬ್ಬರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕ ಮಾಡಲಾಗುತ್ತದೆ ಎಂದು ವಿ.ವಿ. ಮೂಲಗಳು ಖಚಿತಪಡಿಸಿವೆ.