ಚಿಕ್ಕಮಗಳೂರು: ‘ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಅಭಿಯಾನದಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಗೆ ₹ 108.55 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಸಮುದಾಯ, ವೈಯುಕ್ತಿಕ ಶೌಚಾಲಯ, ವಿದ್ಯುತ್, ಜೈವಿಕ ಅನಿಲ ಘಟಕಗಳಿಗೆ ಬಳಸಬೇಕಿದ್ದ ಈ ಹಣವನ್ನು ರಾಜ್ಯ ಸರ್ಕಾರವು ರಸ್ತೆ, ಪಾದಚಾರಿ ನಿರ್ಮಾಣ, ಗೋಡೆಗೆ ಬಣ್ಣ ಬಳಿಯಲು ವ್ಯಯಿಸಿ ದುರ್ಬಳಕೆ ಮಾಡಿಕೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.