ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ‘ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದಾವಣಗೆರೆಯಲ್ಲಿ ವಿಶೇಷ ಆಂದೋಲನ ನಡೆಸಿದಾಗ 15 ಸಾವಿರ ಅಕ್ರಮ ಪಡಿತರ ಚೀಟಿಗಳು ಇರುವುದು ಬೆಳಕಿಗೆ ಬಂದಿದೆ. ಆ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಘವು ಗುಪ್ತವಾಗಿ ತನಿಖೆ ನಡೆಸಿದಾಗ 25 ಲಕ್ಷ ಅಕ್ರಮ ಪಡಿತರ ಚೀಟಿಗಳು ಇರುವುದು ಗೊತ್ತಾಗಿದೆ. ಈ ಬಗ್ಗೆ ಸರ್ಕಾರ ಸಮಗ್ರವಾಗಿ ತನಿಖೆ ನಡೆಸಿ ಅವುಗಳನ್ನು ಮುದ್ರಿಸಲು ನೆರವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.