ಬೆಂಗಳೂರು: ಶ್ರೀರಾಂಪುರ ಬಳಿಯ ದಯಾನಂದ ನಗರದಲ್ಲಿ ಭರತ್ ಕುಮಾರ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊಬೈಲ್ ತಯಾರಿಸುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್, ಎರಡು ವರ್ಷಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ 1 ವರ್ಷದ ಮಗು ಇದೆ.
‘ದಂಪತಿ ನಡುವೆ ಜಗಳವಾಗುತ್ತಿತ್ತು. ಪತ್ನಿಯು ಇತ್ತೀಚೆಗೆ ತವರು ಮನೆಗೆ ಹೋಗಿದ್ದರು. ವಾರದ ಹಿಂದೆ ಮನೆಗೆ ಬಂದು ಮಗುವನ್ನು ಸಹ ಕರೆದೊಯ್ದಿದ್ದರು. ಮಗುವನ್ನು ನೋಡಲು ಭರತ್ ಅವರಿಗೆ ಅವಕಾಶ ನೀಡಿರಲಿಲ್ಲ. ಅದರಿಂದ ಅವರು ನೊಂದಿದ್ದರು’ ಎಂದು ಸಂಬಂಧಿಕರು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.