ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಿ’

Last Updated 1 ಜನವರಿ 2018, 7:00 IST
ಅಕ್ಷರ ಗಾತ್ರ

ಹೊನ್ನಾಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಸುಸಜ್ಜಿತ ಬಾಕ್ಸ್ ಚರಂಡಿಗಳನ್ನು ಹಾಗೂ ಜಮೀನುಗಳಿಗೆ ರಸ್ತೆಯನ್ನು ನಿರ್ಮಿಸಿಕೊಳ್ಳುವ ಸಂಬಂಧ ಗ್ರಾಮ ಪಂಚಾಯ್ತಿ ಸದಸ್ಯರು ಕ್ರಿಯಾ ಯೋಜನೆ ತಯಾರಿಸುವಂತೆ ಶಾಸಕ ಶಾಂತನಗೌಡ ಹೇಳಿದರು.

ಶನಿವಾರ ತಾಲ್ಲೂಕಿನ ನೆಲಹೊನ್ನೆ ಗ್ರಾಮದಲ್ಲಿ  ₹ 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಆದ್ದರಿಂದ ಉದ್ಯೋಗ ಖಾತ್ರಿ ಯೋಜನೆಯನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಮೋಹನ್, ಬಸವರಾಜಪ್ಪ, ಮುಖಂಡರಾದ ಕರಿಯಪ್ಪ, ಕೃಷ್ಣಪ್ಪ, ನಂಜಪ್ಪ, ಜಯಪ್ಪ ಸೇರಿದಂತೆ ಹಲವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT