ಸಕಲೇಶಪುರ: ತಾಲ್ಲೂಕಿನ ವಳಲಹಳ್ಳಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಗ್ರಾಮಸ್ಥರು ಶನಿವಾರ ವಳಲಹಳ್ಳಿ ಗ್ರಾ.ಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕುಡಿಯುವ ನೀರು, ರಸ್ತೆ, ಬೀದಿ ದೀಪ, ವಸತಿ ಸೌಲಭ್ಯ ಒದಗಿಸಲು ಗ್ರಾಮ ಪಂಚಾಯಿತಿ ವಿಫಲವಾಗಿದೆ. ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡಿಲ್ಲ. ಪಿಡಿಒ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರು, ಸದಸ್ಯರ ವಿರುದ್ಧ ಘೋಷಣೆ ಕೂಗಿ, ತಾ.ಪಂ ಇಒ ಬಂದು ಸ್ಪಷ್ಟನೆ ನೀಡಲಿ ಎಂದು ಪಟ್ಟುಹಿಡಿದರು.
ತಾ.ಪಂ ಇಒ ಶಿವಾನಂದ, ಸ್ಥಳಕ್ಕೆ ಅಧೀನ ಅಧಿಕಾರಿ ಕಳುಹಿಸಿದರು. ಮನವಿ ಆಲಿಸಿದ ಅಧಿಕಾರಿ, ಪಿಡಿಒ ಬದಲಾವಣೆ ಕುರಿತ ಬೇಡಿಕೆಯನ್ನು ಜಿಲ್ಲಾ ಪಂಚಾಯಿತಿ ಗಮನಕ್ಕೆ ತರಲಾಗು ವುದು ಎಂದು ಭರವಸೆ ನೀಡಿದರು.