ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಅಮ್ಮಕೊಡವ , ಕೊಡವ ಸಮಾಜದಿಂದ ಧರಣಿ

Last Updated 1 ಜನವರಿ 2018, 8:37 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಅಖಿಲ ಅಮ್ಮಕೊಡವ ಮತ್ತು ಕೊಡವ ಸಮಾಜದ ವತಿಯಿಂದ ಭಾನುವಾರ ಪೊನ್ನಂಪೇಟೆ ತಾಲ್ಲೂಕು ರಚನೆಗೆ ಒತ್ತಾಯಿಸಿ ಧರಣಿ ನಡೆಸಲಾಯಿತು.

ಕೊಡವ ಸಾಂಪ್ರದಾಯಕ ಉಡುಪಿನಲ್ಲಿ ಆಗಮಿಸಿದ ಪ್ರತಿಭಟನಾ ಕಾರರು ಗಾಂಧಿ ಮಂಟಪದ ಬಳಿ ಕುಳಿತು ಧರಣಿ ನಡೆಸುವ ಮೂಲಕ ನೂತನ ತಾಲ್ಲೂಕು ರಚನೆಗೆ ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ವಿಧಾನ ಪರಿಷತ್‌ನಲ್ಲಿ ತಾಲ್ಲೂಕು ರಚನೆಗೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಅವರಿಗೆ ಎಲ್ಲರೂ ಬೆಂಬಲ ಸೂಚಿಸಬೇಕು. ನೂತನ ತಾಲ್ಲೂಕು ರಚನೆ ಆಗಲೇ ಬೇಕು ಎಂದು ಸ್ಥಳೀಯ ಕೊಡವ ಸಮಾಜದ ಮಾಜಿ ಅಧ್ಯಕ್ಷ ಚೆಪ್ಪುಡೀರ ಪೊನ್ನಪ್ಪ ಒತ್ತಾಯಿಸಿದರು.

ನಾಗರಿಕ ವೇದಿಕೆ ಅಧ್ಯಕ್ಷ ಪಿ.ಬಿ.ಪೂಣಚ್ಚ, ಹಿರಿಯರಾದ ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಅಮ್ಮತ್ತೀರ ಕೃಷ್ಣಕುಮಾರ್, ಜಿ.ಪಂ.ಸದಸ್ಯ ಬಾನಂಡ ಪೃಥ್ಯು, ಅಡ್ಡಂಡ ಅನಿತಾ ಕಾರ್ಯಪ್ಪ, ವಕೀಲ ಮತ್ರಂಡ ಅಪ್ಪಚ್ಚು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT