ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಬೋಬಡೆ ಮಾತನಾಡಿ, ‘ನಿವೃತ್ತರಿಗೆ ನೀಡುವ ಪಿಂಚಣಿ ಯಾವ ಉದಾರತೆಯೂ ಅಲ್ಲ ಅಥವಾ ಯಾವ ಉಪಕಾರವೂ ಅಲ್ಲ, ಸತತವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದವರಿಗೆ ಪಿಂಚಣಿ ನೀಡುವುದು ಸರ್ಕಾರದ ಕರ್ತವ್ಯ. ಹಿರಿಯ ನಾಗರಿಕರ ರಕ್ಷಣೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಹೊಣೆಯಾಗಿರುತ್ತದೆ’ ಎಂದು ತಿಳಿಸಿದರು.