ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲರಿಗೂ ಕಾನೂನು ಅರಿವು ಅಗತ್ಯ’

Last Updated 1 ಜನವರಿ 2018, 13:13 IST
ಅಕ್ಷರ ಗಾತ್ರ

ಸುರಪುರ: ‘ಕಾನೂನು ತಿಳಿವಳಿಕೆ ಕೊರತೆಯಿಂದ ಅವಘಡಗಳು ನಡೆಯುತ್ತಿವೆ. ಪ್ರತಿಯೊಬ್ಬ ನಾಗರಿಕ ಕಾನೂನು ಅರಿವು ಪಡೆಯಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಡಿ. ನಾಗರಾಜೇಗೌಡ ಹೇಳಿದರು.

ನಗರದ ನ್ಯಾಯಾಲಯದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಜರುಗಿದ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬರೂ ಕಾನೂನನ್ನು ಅರಿತು ಗೌರವಿಸಿದರೆ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಪೊಲೀಸರು ದೂರು ಸ್ವೀಕರಿಸದ ಸಂದರ್ಭದಲ್ಲಿ ಕಕ್ಷಿದಾರರು ನೇರವಾಗಿ ನ್ಯಾಯಾಲಯಕ್ಕೆ ಬಂದು ದೂರು ದಾಖಲಿಸಬಹುದು’ ಎಂದು ಅವರು ತಿಳಿಸಿದರು.

ವಕೀಲರಾದ ಚನ್ನಪ್ಪ ಹೂಗಾರ, ವಿಶ್ವಾಮಿತ್ರ ಕಟ್ಟಿಮನಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್.ಸಿದ್ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಅಮರನಾಥ ಬಿ.ಎನ್, ಸರ್ಕಾರಿ ಸಹಾಯಕ ಅಭಿಯೋಜಕ ಮಹಾಂತೇಶ ಮಸಳೆ, ವಕೀಲರಾದ ಯಂಕಾರಡ್ಡಿ ಹವಾಲ್ದಾರ್, ನಂದಣ್ಣ ಬಾಕ್ಲಿ ಇದ್ದರು.

ಶಿರಸ್ತೇದಾರ್ ಬಿ.ಗೌಡ ಸ್ವಾಗತಿಸಿದರು. ನಂದನಗೌಡ ಪಾಟೀಲ ನಿರೂಪಿಸಿದರು. ಮಂಜುನಾಥ ಹುದ್ದಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT