ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೆಬ್ರುವರಿ ತಿಂಗಳಿನಲ್ಲಿ ಈ ಘಟನೆ ನಡೆದಿರುವುದು ನಿಜ. ಜನಾರ್ದನ ಪೂಜಾರಿ ಅವರಿಂದಲೇ ನನಗೆ ಗೊತ್ತಾಯಿತು. ಜುಲೈ 3ರಂದು ಪತ್ರಿಕಾಗೋಷ್ಠಿ ನಡೆಸಿ ಅವರನ್ನು ಪ್ರಮಾಣಕ್ಕೆ ಆಹ್ವಾನಿಸಿದ್ದೆ. ಅದಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ. ಭಾನುವಾರ ಸಚಿವರು ಬಂಟ್ವಾಳದಲ್ಲಿ ಕಣ್ಣೀರು ಹಾಕಿದ್ದಾರೆ. ಅವರು ಹೇಳುವುದು ಸತ್ಯವೇ ಆಗಿದ್ದಲ್ಲಿ ಮಂಜು ನಾಥನ ಸನ್ನಿಧಿಗೆ ಬಂದು ಪ್ರಮಾಣ ಮಾಡಲಿ’ ಎಂದು ಆಗ್ರಹಿಸಿದರು.