ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಚ್ಛ ಭಾರತ ನಿರ್ಮಲ ಶ್ರದ್ಧಾ ಕೇಂದ್ರ ಪರಿಕಲ್ಪನೆ ಅಡಿಯಲ್ಲಿ ಪ್ರತಿ ವರ್ಷವೂ ದೇವಾಲಯಗಳ ಆಡಳಿತ ಮಂಡಳಿಗಳು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ವಿವರಿಸಿದರು. ‘ಈ ವರ್ಷ ಜಿಲ್ಲೆಯ ತುಮಕೂರು, ಗುಬ್ಬಿ, ತುರುವೇಕರೆ, ಕುಣಿಗಲ್, ತಿಪಟೂರು ತಾಲ್ಲೂಕುಗಳಲ್ಲಿ ಈ ಕಾರ್ಯ ನಡೆಯಲಿದೆ’ ಎಂದರು.