ಆಳಂದ: ತಾಲ್ಲೂಕಿನ ಬೆಳಮಗಿಯಲ್ಲಿ ಭಾನುವಾರ ರಾತ್ರಿ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕಿಡಿಗೇಡಿ ಯುವಕರ ಗುಂಪು ಗ್ರಾಮದ ಸಮುದಾಯ ಭವನದಲ್ಲಿದ್ದ ಬುದ್ಧ, ಬಸವ ಮತ್ತು ಡಾ.ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ಗೆ ಸೆಗಣಿ ಬಳಿದು ಅವಮಾನ ಮಾಡಿದೆ.
ಗ್ರಾಮದ ಏಳು ಜನ ಆರೋಪಿಗಳು ಮದ್ಯ ಕುಡಿದ ಅಮಲಿನಲ್ಲಿ ಈ ಕೃತ್ಯ ಎಸೆಗಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಿಪಿಐ ಎಚ್.ಬಿ.ಸಣ್ಣಮನಿ, ಪಿಎಸ್ಐ ಸುರೇಶಬಾಬು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಘಟನೆ ಖಂಡಿಸಿ ತಾಲ್ಲೂಕಿನ ದಲಿತಪರ ಸಂಘಟನೆಗಳು ದಿನವಿಡೀ ಗ್ರಾಮದ ಮುಖ್ಯರಸ್ತೆ ಮೇಲೆ ಪ್ರತಿಭಟನೆ ನಡೆಸಿದವು. ‘ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.