‘ಕೋಚ್ ಆಗಿ ನೇಮಕವಾದ ನಂತರ ನಮ್ಮನ್ನು ಭೇಟಿ ಮಾಡಿದ್ದ ಚಂದ್ರಕಾಂತ್, ಪ್ರಶಸ್ತಿಯ ಹಣವನ್ನು ಯಾವ ಉದ್ದೇಶಕ್ಕೆ ಬಳಸುತ್ತೀರಿ ಎಂದು ಪ್ರಶ್ನಿಸಿದ್ದರು. ಆ ಕ್ಷಣ ನಾವೆಲ್ಲಾ ಅಚ್ಚರಿಯಿಂದ ಅವರತ್ತ ನೋಡಿ ಯಾವ ಪ್ರಶಸ್ತಿ ಎಂದು ಕೇಳಿದ್ದೆವು. ಅದಕ್ಕೆ ಪ್ರತಿಕ್ರಿಯಿಸಿದ್ದ ಅವರು ಈ ಬಾರಿ ವಿದರ್ಭ ತಂಡ ರಣಜಿ ಟ್ರೋಫಿ ಗೆಲ್ಲುತ್ತದೆಯಲ್ಲ, ಆಗ ಸಿಗುವ ಹಣ ಎಂದಿದ್ದರು. ಚಂದ್ರಕಾಂತ್ ಮಾತು ಕೇಳಿ ನಮಗೆ ತುಂಬಾ ಖುಷಿಯಾಗಿತ್ತು. ಅವರು ಹೇಳಿದ್ದನ್ನು ಈಗ ಮಾಡಿ ತೋರಿಸಿದ್ದಾರೆ’ ಎಂದು ವೈದ್ಯ ಸಂತಸ ವ್ಯಕ್ತಪಡಿಸಿದರು.