ಧಾರವಾಡ: ‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾನಮಾನಕ್ಕಾಗಿ ನಡೆಯುತ್ತಿರುವ ಹೋರಾಟ ನಿರಂತರವಾದುದು. ಚುನಾವಣೆ ಉದ್ದೇಶದಿಂದ ಹೋರಾಟ ಆರಂಭವಾಗಿದೆ ಎನ್ನುವ ಹೇಳಿಕೆಗಳು ಬಾಲಿಶವಾದವು’ ಎಂದು ಗದಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತ್ಯೇಕ ಧರ್ಮ ಕುರಿತು ಪರಿಶೀಲನೆಗೆ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಸಮಿತಿ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ. ತಕರಾರುಗಳಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ’ ಎಂದರು.
‘ಪ್ರತ್ಯೇಕ ಧರ್ಮ ಕುರಿತು ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಸ್ವಾಮೀಜಿ ಆಹ್ವಾನ ನೀಡಿರುವ ಬಗ್ಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡು
ವುದಿಲ್ಲ’ ಎಂದು ಅವರು ತಿಳಿಸಿದರು.