ಭಕ್ತರು ಮೇಲುಕೋಟೆಯ ಕಲ್ಯಾಣಿಯಲ್ಲಿ ಪೂಜೆ ಸಲ್ಲಿಸಿ ಯೋಗನರಸಿಂಹಸ್ವಾಮಿ ಮತ್ತು ಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ಬಂದು ಗೋವಿಂದ ಗೋವಿಂದ ಎಂದು ಘೋಷ ಮೊಳಗಿಸುತ್ತ ದೇವರದರ್ಶನ ಪಡೆದರು. ದೇವಾಲಯದ ಬಳಿಗೆ ಬೈಕ್ ಸವಾರರಿಗೆ ಮಾತ್ರ ಅವಕಾಶ ನೀಡಿ, ಇತರ ವಾಹನಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಮೇಲುಕೋಟೆ ಎಸ್.ಐ ಮೋಹನ್, ಎಎಸ್ಐ ಮಲ್ಲಪ್ಪ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ದೇವಾಲಯದ ಹಿರಿಯ ಗುಮಾಸ್ತ ಶ್ರೀರಂಗರಾಜನ್ , ಭಗವಾನ್ ಇದ್ದರು.