‘ಸ್ಥಿತಿವಂತರ ಕುಟುಂಬದಲ್ಲಿ ಹುಟ್ಟಿದ ನಾನು ಬಡತನವನ್ನು ಕಣ್ಣಾರೆ ನೋಡಿರಲಿಲ್ಲ. ಆದರೆ, ಕಲಬುರ್ಗಿಯಲ್ಲಿ 1969ರಲ್ಲಿ ತೀವ್ರ ಬರಗಾಲ ಬಂದು ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಅಲ್ಲಿನ ಜನರಿಗೆ ಸಹಾಯ ಮಾಡಲು ಪೇಜಾವರ ಸ್ವಾಮೀಜಿ ಅವರೊಂದಿಗೆ ನಾನು ಸಹ ಹೋಗಿದ್ದೆ. ಬರಗಾಲ, ಬಡತನ ಹಾಗೂ ಜನರ ಬವಣೆಯನ್ನು ನೋಡಿದ ನನ್ನಲ್ಲಿ ಬದಲಾವಣೆ ಬಂತು. ಮನಸ್ಸು ಪರಿವರ್ತನೆ ಆಯಿತು’ ಎಂದು ಅವರು ಹಳೆಯ ಸನ್ನಿವೇಶವನ್ನು ನೆನಪು ಮಾಡಿಕೊಂಡರು.