ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲಹಳ್ಳಕ್ಕೆ ನೀರು ಹರಿಸಲು ಒತ್ತಾಯ

Last Updated 3 ಜನವರಿ 2018, 8:59 IST
ಅಕ್ಷರ ಗಾತ್ರ

ರಾಯಬಾಗ: ತಾಲ್ಲೂಕಿನ ಚಿಂಚಲಿ ಗ್ರಾಮದ ಮಾಯಕ್ಕಾ ದೇವಿಯ ಜಾತ್ರೆಯು ಜ.25ರಿಂದ ಒಂದು ತಿಂಗಳು ವಿಜೃಂಭಣೆಯಿಂದ ನಡೆಯ ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿ ಸಲಿದ್ದಾರೆ. ಭಕ್ತರು ಹಾಲಹಳ್ಳದಲ್ಲಿ ಸ್ನಾನ ಮಾಡಿ ಮಡಿಯುಟ್ಟು ದೇವಿಯ ದರ್ಶನ ಮಾಡುವುದು ವಾಡಿಕೆ. ಆದರೆ, ಸದ್ಯ ನೀರಿನ ಹರಿವು ಇಲ್ಲದೇ ಹಳ್ಳದಲ್ಲಿ ಪಾಚಿ ಬೆಳೆದಿದೆ.

‘ಜಾತ್ರೆಗೆ ಮಹಾರಾಷ್ಟ್ರ, ಗೋವಾ, ಆಂಧ್ರ, ದೆಹಲಿ, ತಮಿಳುನಾಡು ರಾಜ್ಯಗಳಿಂದ ಲಕ್ಷಾಂತರ ಭಕ್ತರು ಬರುವ ಸಾಧ್ಯತೆ ಇದೆ. ಆದರೆ, ನೀರಿನ ಸಮಸ್ಯೆ ಉಂಟಾಗುವ ಭೀತಿ ಗ್ರಾಮಸ್ಥರಲ್ಲಿದೆ. ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು’ ಎಂದು ಮಾಯಕ್ಕಾ ದೇವಸ್ಥಾನ ಕಮಿಟಿ ಕಾರ್ಯದರ್ಶಿ ಯಲ್ಲಪ್ಪ ಮಲಾಜುರೆ ಒತ್ತಾಯಿಸಿದ್ದಾರೆ.

‘ಸಮೀಪ ಗ್ರಾಮಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಸಾಕಷ್ಟು ಭಕ್ತರು ಕಾಲ್ನಡಿಗೆ, ಎತ್ತಿನ ಗಾಡಿಗಳಲ್ಲಿ ಬರುತ್ತಾರೆ. ಅವರಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಶುಕ್ರವಾರ ತಾಲ್ಲೂಕ ಆಡಳಿತ ಜೊತೆಗೆ ಚರ್ಚೆ ನಡೆಸಲಾಗಿದೆ’ ದೇವಸ್ಥಾನ ಕಮಿಟಿ ನಿರ್ದೇಶಕ ಮಹೇಶ ಖೊಂಬೆನ್ನರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT