ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಕಾಲೇಜು ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ’ಲೋಕ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಳ್ವಿಕೆ ಇದ್ದ ಕಾಲದಲ್ಲಿ ಹಲವಾರು ಕಷ್ಟಗಳನ್ನು ಎದುರಿಸಿ ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು ಎನ್ನುವ ಮಹದಾಸೆ ಹೊತ್ತು ಯಶಸ್ವಿಯಾದವರು. ಓದುವುದೇ ಅಪರಾಧ ಎನ್ನುವ ಕಾಲದಲ್ಲಿ ಅಕ್ಷರ ಜ್ಞಾನ ನೀಡಲು ಮುಂದೆ ಬಂದ ತಾಯಿ ಫುಲೆ ಕೇವಲ ಶಿಕ್ಷಕಿಯಾಗಿರದೇ, ಸಾಮಾಜಿಕ ಮೌಲ್ಯಗಳ ಪ್ರತಿಪಾದಕಿಯಾಗಿದ್ದರು’ ಎಂದರು.