ಈ ಹಿಂದೆ ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಲವು ದಿನಗಳ ಕಾಲ ನಡೆಸಿದ ಧರಣಿಯಿಂದ ಜನರು ಸಾಕಷ್ಟು ಪರದಾಡಿದ್ದರು. ನಗರದ ವಿಠ್ಠಲ ಆಸ್ಪತ್ರೆ, ಜರ್ಮನ್ ಆಸ್ಪತ್ರೆ, ಶ್ರೀಯಾ ಆಸ್ಪತ್ರೆ, ಡಾ. ರಾಮನಗೌಡರ ಆಸ್ಪತ್ರೆ ಸೇರಿದಂತೆ ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳ ವೈದ್ಯರು ಕೇವಲ ಒಳರೋಗಿಗಳಾಗಿ ದಾಖಲಾದವರಿಗೆ ಮಾತ್ರ ಚಿಕಿತ್ಸೆ ನೀಡಿದರು. ಸಂಜೆ 6ರ ನಂತರ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.