ಜನಿವಾರ ಕೆರೆಯಿಂದ 9.6ಕಿಮೀ ದೂರದ ಬಸವನಹಳ್ಳಿ ಬಳಿ ಕಟ್ಟೆ ನಿರ್ಮಿಸಿ ನಂತರ ಎರಡು ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು. ಲಭ್ಯವಿರುವ 56 ಕ್ಯುಸೆಕ್ ನೀರು ಬಳಸಿ ಹಿರೀಸಾವೆ– ಶ್ರವಣಬೆಳಗೊಳ ಹೋಬಳಿ ವ್ಯಾಪ್ತಿಯ 16 ಕೆರೆಗಳು ಹಾಗೂ ಮಂಡ್ಯ ಜಿಲ್ಲೆ ಸಂತೆಬಾಚಹಳ್ಳಿಯ 6 ಕೆರೆಗಳು ಸೇರಿ 22 ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಎನ್.ಕೃಷ್ಣೇ ಗೌಡ, ಅಧಿಕಾರಿಗಳಾದ ನಾಗೇಂದ್ರ, ಅಮೃತ್ ರಾಜ್, ಉಮೇಶ್, ವಿಜಯ್, ಮುಖಂಡ ಪುಟ್ಟಸ್ವಾಮಿ ಇದ್ದರು.