ಬುಧವಾರ ಇಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮವನ್ನು ಯೋಗೇಶ್ವರ್ ವಿರುದ್ಧದ ಟೀಕೆಗೆ ಬಳಸಿಕೊಂಡರು. ‘ಇಲ್ಲಿನ ಕಣ್ವಾ ಏತ ನೀರಾವರಿ ಯೋಜನೆಗೆ ₨182 ಕೋಟಿ ಅನುದಾನ ಕೊಟ್ಟಿದ್ದು ನಾನು. ಆದರೆ ಶಾಸಕರು ಅದನ್ನು ತಾನೇ ಮಾಡಿದ್ದೆಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅವರಿಗೆ ಧೈರ್ಯ ಇದ್ದಿದ್ದರೆ ಇದೇ ವೇದಿಕೆಗೆ ಬಂದು ಸತ್ಯ ಹೇಳಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.