ಮಂಗಳೂರು: ದೀಪಕ್ ರಾವ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸಬೇಕು. ಅಲ್ಲಿಯವರೆಗೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಕಾಂಗ್ರೆಸ್ ನ ತಾಲಿಬಾನಿ ನೀತಿಯಿಂದಾಗಿಯೇ ಹತ್ಯೆಗಳು ನಡೆಯುತ್ತಿವೆ. ರಮಾನಾಥ ರೈ ಅವರು ಅಲ್ಲಾಹುವಿನ ಕೃಪೆಯಿಂದಲೇ ಶಾಸಕರಾಗಿದ್ದಾರೆ. ಅದಕ್ಕಾಗಿಯೇ ಮುಸ್ಲಿಮರ ಒಲೈಕೆಯಲ್ಲಿ ತೊಡಗಿದ್ದಾರೆ.
ತಾಲಿಬಾನಿಗಳನ್ನು ಗುತ್ತಿಗೆ ಪಡೆದವರಂತೆ ವರ್ತಿಸುವ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.