ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಕ್ ಹತ್ಯೆ: ಮಂಗಳೂರಿಗೆ ದೌಡಾಯಿಸಿದ ಎಡಿಜಿಪಿ ಕಮಲ್‌ ಪಂತ್

Last Updated 3 ಜನವರಿ 2018, 15:40 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಬಳಿಕ ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಕಮಲ್‌ ಪಂತ್ ಅವರು ಮಂಗಳೂರಿಗೆ ದೌಡಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ವಿವರ ಪಡೆದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು, ಕೂಡಲೆ ಮಂಗಳೂರಿಗೆ ಧಾವಿಸುವಂತೆ ಕಮಲ್ ಪಂತ್‌ಗೆ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ತುಕಡಿಗಳನ್ನು ನಿಯೋಜಿಸಬೇಕು, ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೆಡ್ಡಿ ಆದೇಶಿಸಿದ್ದಾರೆ.

ಕೊಚ್ಚಿ ಕೊಲೆ

ಮಂಗಳೂರಿನ ‌ಸುರತ್ಕಲ್‌ ಸಮೀಪದ ಕೃಷ್ಣಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕಿನಲ್ಲಿ ಹೋಗುತ್ತಿದ್ದ ಯುವಕ ಕಾಟಿಪಳ್ಳ ಕೈಕಂಬ ನಿವಾಸಿ ದೀಪಕ್‌ನನ್ನು ಕಾರಿನಲ್ಲಿ ಬೆನ್ನಟ್ಟಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಈತ ದೂರಸಂಪರ್ಕ ಕಂಪೆನಿಯೊಂದರ ಸಿಮ್ ವಿತರಕನಾಗಿದ್ದ. ಮಧ್ಯಾಹ್ನ 2ರ ಸುಮಾರಿಗೆ ಈತನನ್ನು ಕೊಲೆ‌ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT