ಹೀಗಾಗಿ, ಕೊಳವೆಬಾವಿ ತೋಡಿ ಅಂತರ್ಜಲ ದಕ್ಕಿದರೆ ಮಾತ್ರ ಕೃಷಿ ಸಾಧ್ಯವಾದೀತು ಎಂಬ ತೀರ್ಮಾನಕ್ಕೆ ಇಡೀ ಕೃಷಿ ಸಮುದಾಯ ಬರುತ್ತಿದೆ! ಈಗಿನ್ನೂ ಹೇಮಂತ; ವರ್ಷಋತು ಬರಲು ಇನ್ನೂ ಅರು ತಿಂಗಳಿವೆ. ಆದರೆ, ಸಹ್ಯಾದ್ರಿಯ ಜಿಲ್ಲೆಗಳಲ್ಲಿ ಈಗಲೇ ನೀರಿನ ಕೊರತೆ ಕಾಣಿಸುತ್ತಿದೆ. ಸಾಲ ಮಾಡಿಯಾದರೂ ಕೊಳವೆಬಾವಿ ತೋಡುವ ಕಾರ್ಯ ಈಗಾಗಲೇ ಎಲ್ಲೆಡೆ ಆರಂಭವಾಗಿದೆ!