ಬೆಂಗಳೂರು: 2017ನೇ ಸಾಲಿನ ಜಾನಪದಶ್ರೀ ಪ್ರಶಸ್ತಿಗೆ ಧಾರವಾಡದ ವೆಂಕಪ್ಪ ಪುಲಿ ಮತ್ತು ಬಾಗಲಕೋಟೆಯ ವೆಂಕಪ್ಪ ಅಂಬಾಜಿ ಸುಗತೇಕರ ಭಾಜನರಾಗಿದ್ದಾರೆ.
ಸಾಹಿತಿ ಕಾಳೇಗೌಡ ನಾಗವಾರ ಅಧ್ಯಕ್ಷತೆಯ ಆಯ್ಕೆ ಸಮಿತಿ ಶಿಫಾರಸಿನಂತೆ ಇದೇ ಮೊದಲ ಬಾರಿಗೆ ಇಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ತಲಾ ₹ 5 ಲಕ್ಷ ನಗದನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.