ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲಿಬಾನಿಗಳ ಜತೆ ಕಾಂಗ್ರೆಸ್‌ ಒಪ್ಪಂದ

Last Updated 3 ಜನವರಿ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ಕಾಂಗ್ರೆಸ್ಸಿಗರು ತಾಲಿಬಾನಿಗಳ ಜತೆ ಒಳಒಪ್ಪಂದ ಮಾಡಿಕೊಂಡಿದ್ದು, ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರಮಾನಾಥ ರೈ ಅವರು ಅಲ್ಲಾಹುವಿನ ಕೃಪೆಯಿಂದಲೇ ಆರು ಬಾರಿ ಶಾಸಕರಾಗಿದ್ದಾರೆ. ಅವರ ಪ್ರಚೋದಿತ ಹೇಳಿಕೆಗಳು, ಪರೋಕ್ಷ ಬೆಂಬಲದಿಂದ ಹತ್ಯೆಗಳ ಸರಣಿ ಮುಂದುವರಿಯುತ್ತಿವೆ. ಕೂಡಲೇ ಸಚಿವ ರೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಹಿಂದುತ್ವವನ್ನು ಗುತ್ತಿಗೆ ಪಡೆದಿದ್ದಾರೆಯೇ ಎಂದು ಪ್ರಶ್ನಿಸುವ ಯಾರೊಬ್ಬರೂ ದೀಪಕ್‌ ರಾವ್‌ ಶವವನ್ನು ಇಟ್ಟಿದ್ದ ಸ್ಥಳಕ್ಕೆ ಬಂದಿಲ್ಲ. ಇದರಿಂದ ಕಾಂಗ್ರೆಸ್ಸಿನವರು ತಾಲಿಬಾನಿಗಳನ್ನು ಗುತ್ತಿಗೆ ಪಡೆದಿರುವುದು ಸ್ಪಷ್ಟವಾಗುತ್ತದೆ ಎಂದರು.

ದೀಪಕ್‌ ರಾವ್‌ ಕುಟುಂಬಕ್ಕೆ ಕನಿಷ್ಠ ₹25 ಲಕ್ಷ ಪರಿಹಾರ ನೀಡಬೇಕು. ದೀಪಕ್‌ ರಾವ್‌ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು. ಹಿಂದೂ ಕಾರ್ಯಕರ್ತರನ್ನು ಕಳೆದುಕೊಳ್ಳುತ್ತ ಸುಮ್ಮನೆ ಕೂರುವುದಿಲ್ಲ. ಬೇಡಿಕೆ ಈಡೇರುವವರೆಗೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT