ಬೆಂಗಳೂರು: ಜಯನಗರ 1ನೇ ಬ್ಲಾಕ್ನಲ್ಲಿ ಉದ್ಯಾನವನ ಮತ್ತು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿದ್ದ ₹200 ಕೋಟಿ ಮೌಲ್ಯದ 2 ಎಕರೆ 39 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಆಪಾದಿಸಿದರು.
‘ಅಶೋಕ್ ಧಾರಿವಾಲ ಎಂಬುವವರಿಗೆ ಲಾಭ ಮಾಡಿಕೊಡಲು ಮುಂದಾದ ಸಿದ್ದರಾಮಯ್ಯ, 2014ರ ಜನವರಿ 27ರಂದು ‘ರಿ–ಡೂ’ ಹೆಸರಿನಲ್ಲಿ ಈ ಭೂಮಿಯನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದಾರೆ’ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.
‘ಜಮೀನು ಡಿನೋಟಿಫೈ ಮಾಡಿಲ್ಲ. ಹೈಕೋರ್ಟ್ ಆದೇಶ ಪಾಲನೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ಅಶೋಕ್ ಆರೋಪ: ಲಾಲ್ಬಾಗ್ ಸಿದ್ದಾಪುರ (ಈಗ ಜಯನಗರ 1 ನೇ ಬ್ಲಾಕ್ಗೆ ಸೇರಿರುವ) ಗ್ರಾಮದ 27/1, 28/4, 28/5, 28/6 ಸರ್ವೆ ನಂಬರ್ಗಳಲ್ಲಿನ ಒಟ್ಟು 2ಎಕರೆ 39ಗುಂಟೆ ಭೂಮಿಯನ್ನು ಮೈಸೂರು ಮಹಾರಾಜರ ಕಾಲದಲ್ಲೇ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಡಾವಣೆ ನಿರ್ಮಾಣ ಮಾಡಿದಾಗಲೂ ಈ ಉದ್ದೇಶಕ್ಕೆ ಬಿಡಲಾಗಿದೆ. ಇಲ್ಲಿಯವರೆಗಿನ ಯಾವುದೇ ಮುಖ್ಯಮಂತ್ರಿಯೂ ಈ ಭೂಮಿಯನ್ನು ಡಿನೋಟಿಫೈ ಮಾಡಿರಲಿಲ್ಲ. ಆದರೆ, ಮೈಸೂರಿನವರೇ ಆದ ಸಿದ್ದರಾಮಯ್ಯ ಡಿನೋಡಿಫೈ ಮಾಡಿದ್ದಾರೆ ಎಂದು ಆರೋಪಿಸಿದರು.
ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ, ಕೋರ್ಟ್ ತೀರ್ಪು ಉಲ್ಲಂಘಿಸಿದ್ದಾರೆ ಎಂದು ಟೀಕಿಸಿದರು.
ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದರೆ ಪ್ರಯೋಜನವಾಗುವುದಿಲ್ಲ. ಸರ್ಕಾರ ಭೂಮಿಯನ್ನು ವಾಪಸ್ ಪಡೆದು, ಮೂಲ ಉದ್ದೇಶಕ್ಕೆ ಮೀಸಲಿಡಲು ಮುಂದಾಗುವವರೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.
ಹೈಕೋರ್ಟ್ ಆದೇಶ ಪಾಲನೆ: ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.
ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
ಹೈಕೋರ್ಟ್ ಆದೇಶ ಪಾಲನೆ: ಬಿ.ಎಲ್. ಶಂಕರ್
ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.
ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
*
ರಿಯಲ್ ಎಸ್ಟೇಟ್ ಏಜೆಂಟ್ ಅಶೋಕ್ ಧಾರಿವಾಲಗಾಗಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ. ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ.
–ಆರ್. ಅಶೋಕ್, ಬಿಜೆಪಿ ಶಾಸಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.