ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗದು, 1.19 ಕೆ.ಜಿ ಚಿನ್ನಾಭರಣ ಕಳವು

Last Updated 3 ಜನವರಿ 2018, 20:04 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಟಿ.ನಗರದ ಸುಲ್ತಾನ್‌ಪಾಳ್ಯದ ಮುಖ್ಯರಸ್ತೆ ಬಳಿಯ ಕೃಷ್ಣಪ್ಪ ಎಂಬುವರ ಮನೆಗೆ ಹೊಸ ವರ್ಷದಂದು ನುಗ್ಗಿದ ದುಷ್ಕರ್ಮಿಗಳು, ಬೀರು
ವಿನಲ್ಲಿದ್ದ ₹10,000 ನಗದುಹಾಗೂ 1.19 ಕೆ.ಜಿ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.

ಜ.1ರಂದು ಕುಟುಂಬಸ್ಥರ ಜತೆಗೆ ಅವರು ಮೈಸೂರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದ ಕಳ್ಳರು, ಹಿಂಬದಿ ಕಿಟಕಿಯ ಗ್ರಿಲ್ಸ್‌ ಕತ್ತರಿಸಿ ಒಳ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

‘ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ವಶಕ್ಕೆ ಪಡೆದಿ
ದ್ದೇವೆ. ಕಳ್ಳರ ಪತ್ತೆಗೆ ಪ್ರತ್ಯೇಕ ತಂಡ ರಚಿಸಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ ಮೇಲೆ ಸಂಶಯ: ಮೈಸೂರಿಗೆ ಹೋಗುವ ನಿಮಿತ್ತ ಮನೆಯ ಕಾವಲಿಗೆಂದು ಎರಡು ದಿನಗಳ ಮಟ್ಟಿಗೆ ನೇಪಾಳದ ಗೋವಿಂದು (22) ಎಂಬಾತನನ್ನು ಕೃಷ್ಣಪ್ಪ ಕೆಲಸಕ್ಕೆ ಇಟ್ಟುಕೊಂಡಿದ್ದರು.

‘ಮನೆಗೆ ಹಿಂದಿರುಗಿದಾಗ ಆತ ನಾಪತ್ತೆಯಾಗಿದ್ದ. ಆತನ ಮೊಬೈಲ್ ಸಹ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ, ಆತನೇ ಕಳ್ಳತನ ಮಾಡಿರಬಹುದು’ ಎಂದು ಕೃಷ್ಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT