ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಮಕ್ಕಳನ್ನು ಬಾವಿಗೆಸೆದು ತಂದೆ ಆತ್ಮಹತ್ಯೆ

Last Updated 3 ಜನವರಿ 2018, 20:19 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಹೂಡದಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಮಕ್ಕಳಿಬ್ಬರನ್ನು ಬಾವಿಗೆ ಎಸೆದು ತಂದೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ರಂಗಯ್ಯ ನಾಗಯ್ಯ ಗುತ್ತೇದಾರ (30), ಶಿವಕುಮಾರ (5), ಶ್ರೀಕಾಂತ (2) ಮೃತರು. ಪತ್ನಿಯೊಂದಿಗೆ ಜಗಳವಾಡಿದ ರಂಗಯ್ಯ ಮಕ್ಕಳೊಂದಿಗೆ ಹೊಲಕ್ಕೆ ತೆರಳಿದ್ದಾರೆ. ಮಕ್ಕಳಿಬ್ಬರಿಗೆ ಕಲ್ಲುಕಟ್ಟಿ ಬಾವಿಗೆ ಹಾಕಿ ಅರ್ಧ ಕಿ.ಮೀ ದೂರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾವಿಯಲ್ಲಿ ಹುಡುಕಾಟ ಆರಂಭಿಸಿದ ಕೆಲ ಹೊತ್ತಿನಲ್ಲೇ ಶ್ರೀಕಾಂತನ ಶವ ಪತ್ತೆಯಾದರೆ, ಶಿವಕುಮಾರನ ಶವ ರಾತ್ರಿ ಪತ್ತೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT