ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಇಚ್ಛಾಶಕ್ತಿ ತೋರಲು ಆಗ್ರಹ

Last Updated 6 ಜನವರಿ 2018, 9:22 IST
ಅಕ್ಷರ ಗಾತ್ರ

ನರಗುಂದ: ‘ಪಕ್ಷ ಯಾವುದೇ ಇರಲಿ, ರೈತರ ಹಿತ ಬಯಸಿದರೆ ಮಾತ್ರ ಒಳಿತಾಗುತ್ತದೆ’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಹೇಳಿದರು. ಪಟ್ಟಣದಲ್ಲಿ ನಡೆಯುತ್ತಿರುವ ಮಹ\ದಾಯಿ ಧರಣಿಯ 906ನೇ ದಿನ ಶುಕ್ರವಾರ ಅವರು ಮಾತನಾಡಿದರು.

‘ಮಹದಾಯಿ ಸಮಸ್ಯೆ ಇತ್ಯರ್ಥಗೊಳ್ಳಲು ಮೂರು ವರ್ಷದ ಹೋರಾಟ ಸಾಕಾಗುವುದಿಲ್ಲ. ಎಲ್ಲ ಪಕ್ಷಗಳು ಇದನ್ನು ಚುನಾವಣೆ ದಾಳವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆಯೇ ಹೊರತು, ಇದರ ಜಾರಿಗೆ ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಇದಕ್ಕೆ ಹಿನ್ನಡೆ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮಹದಾಯಿ ನದಿ ನೀರಿನ ವಿಷಯದಲ್ಲಿ ಗೋವಾ ಪ್ರಾಮಾಣಿಕತೆ ಪ್ರದರ್ಶಿಸಬೇಕು. ಅಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಸೇರಿಕೊಂಡು ತೊಡಕುಗಳನ್ನು ನಿವಾರಿಸಬೇಕು. ಪ್ರಧಾನಿ ಮಧ್ಯಸ್ಥಿಕೆ ವಹಿಸುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಲು ಹೆಚ್ಚಿನ ಗಮನ ನೀಡಬೇಕು’ ಎಂದು ಆಗ್ರಹಿಸಿದರು.

ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಮಾತನಾಡಿ ‘ಮಹದಾಯಿ ಯೋಜನೆ ಅನುಷ್ಠಾನದಲ್ಲಿ ರಾಜಕೀಯ ಬೇಡ. ಬಯಲುಸೀಮೆಯ ರೈತರ ಬಾಳು ಹಸನಾಗಬೇಕಿದೆ. ಅದಕ್ಕೆ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕಿದೆ’ ಎಂದು ಹೇಳಿದರು.

ಧರಣಿಯಲ್ಲಿ ಚನ್ನಪ್ಪಗೌಡ ಪಾಟೀಲ, ಎಸ್‌.ಬಿ.ಜೋಗಣ್ಣವರ, ಶ್ರಿಶೈಲ ಮೇಟಿ, ಅನಸವ್ವ ಶಿಂಧೆ, ಚನ್ನವ್ವ ಕರಜಗಿ,, ಎಲ್‌.ಬಿ.ಮುನೇನಕೊಪ್ಪ, ಚನ್ನಬಸವ್ವ ಆಯಟ್ಟಿ, ಅರ್ಜುನ ಮಾನೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT