ರಾಮನಗರ: ನಗರದ ಹೊರವಲಯದಲ್ಲಿರುವ ವಡೇರಹಳ್ಳಿ ಬಳಿ ಭಾನುವಾರ ಬೆಳಿಗ್ಗೆ ಬೆಂಗಳೂರು ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು.
ವಡೇರಹಳ್ಳಿ ನಿವಾಸಿ ಕೃಷ್ಣಪ್ಪ (40) ಮೃತರು. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹೆದ್ದಾರಿಯಲ್ಲಿ ಬಿಗುವಿನ ವಾತಾವರಣ ಇದ್ದು, ಉದ್ರಿಕ್ತರು ಬಸ್ ಗಾಜು ಒಡೆದು ಪ್ರತಿಭಟನೆ ನಡೆಸಿದರು. ರಾಮನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.