ಪಟ್ಟಣದ ಡಿಎಸ್ ಬಿಳೀಗೌಡ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಅವರು, ಇದೇ 8 ರಿಂದ ಸೆಮಿಸ್ಟರ್ ಪರೀಕ್ಷೆ ಪ್ರಾರಂಭವಾಗಲಿದ್ದು, ಮೊಬೈಲ್ನಲ್ಲಿ ಹೆಚ್ಚು ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ತಂದೆ ಯಾದವ ಸುವರ್ಣ ಅವರು ಮಗಳಿಂದ ಮೊಬೈಲನ್ನು ಕಿತ್ತುಕೊಂಡಿದ್ದರು. ಇದರಿಂದ ಬೇಸರಗೊಂಡ ಧನ್ಯಶ್ರೀ ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯಾದವ ಸುವರ್ಣ ಮೂಡಿಗೆರೆ ಪೊಲೀಸ್ಠಾಣೆಗೆ ದೂರು ನೀಡಿದ್ದಾರೆ.