ಶರಣೆ ಗಿರಿಜಕ್ಕ ಧರ್ಮರಡ್ಡಿ ಅವರು ಹೇಮರಡ್ಡಿ ಮಲ್ಲಮ್ಮನ ಪ್ರವಚನ ನೀಡಲಿದ್ದಾರೆ. ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ವೇಮನಾನಂದ ಸ್ವಾಮೀಜಿ, ಶಾಸಕ ಜಿ.ಎಸ್.ಪಾಟೀಲ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ಕಮಿಟಿ ಅಧ್ಯಕ್ಷ ಮುತ್ತಣ್ಣ ಕೊಂತಿಕೊಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.