ಮೈಸೂರು: ‘ಆರ್ಎಸ್ಎಸ್, ಬಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಷ, ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್ ಹೇಳಿದ್ದಾರೆ.
‘ರಾಜ್ಯದಲ್ಲಿ 21 ಹಿಂದೂಗಳ ಹತ್ಯೆ ನಡೆದಿದೆ. ಇದರಲ್ಲಿ ಪಿಎಫ್ಐ ಸಂಘಟನೆಯ ಪಾತ್ರವಿದ್ದರೂ ಈ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿಲ್ಲ. ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧ ಎಷ್ಟೇ ಕತ್ತಿ ಮಸೆದರೂ ಸಂಘಟನೆಯ ದೇಶಭಕ್ತಿ ಕುಂದಿಸಲು ಸಾಧ್ಯವಿಲ್ಲ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.