ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯ ಕುರಿತು ಈಶ್ವರಪ್ಪ ಅವರು ಇತ್ತೀಚೆಗೆ ಹೈಕಮಾಂಡ್ಗೆ ದೂರು ನೀಡಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯ ಟಿಕೆಟ್ ಕುರಿತು ಯಾರಿಗೂ ಆಶ್ವಾಸನೆ ನೀಡದಂತೆ ಹಾಗೂ ಟಿಕೆಟ್ ದೊರೆಯುವುದು ನಿಶ್ಚಿತ ಎಂದು ಘೋಷಿಸದಂತೆ ಯಡಿಯೂರಪ್ಪ ಅವರಿಗೆ ತಿಳಿಸಿದ್ದ ವರಿಷ್ಠರು, ಟಿಕೆಟ್ ಹಂಚಿಕೆಯ ಹೊಣೆ ಹೈಕಮಾಂಡ್ನದ್ದು ಎಂದೂ ಹೇಳಿದ್ದಾರೆ. ಜೊತೆಗೆ, ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವಂತಹ ಚಟುವಟಿಕೆಯಲ್ಲಿ ತೊಡಗದೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಈಶ್ವರಪ್ಪ ಅವರಿಗೂ ಸೂಚಿಸಿದ್ದಾರೆ ಎಂದು ಅವರು ಹೇಳಿದರು.