ತುಮಕೂರು: ‘ಆರ್ಎಸ್ಎಸ್ ಹಾಗೂ ಬಜರಂಗದಳದವರು ಉಗ್ರಗಾಮಿಗಳು‘ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಬಿಜೆಪಿ ಮುಂದಾಗಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಎಚ್ಚರಿಕೆ ನೀಡಿದರು.
ತುಮಕೂರಿನಲ್ಲಿ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ವಿವಾದದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂಗು ತೂರಿಸುತ್ತಿರುವುದು ಸರಿಯಲ್ಲ. ಅವರಿಗೆ ಸಮಸ್ಯೆ ಬಗೆ ಹರಿಸಿ ಕೊಳ್ಳುವ ಶಕ್ತಿ ಇದೆ ಎಂದರು.