</p><p>ದ್ಯೋಗಿಯ ಮಗಳ ಮದುವೆಗೆಂದು ನಾಗಪುರಕ್ಕೆ ಹೋಗಿದ್ದಾಗ ಲೋಯ ಮೃತಪಟ್ಟಿದ್ದಾರೆ. ಅವರ ಸಾವಿನ ಸಂದರ್ಭದ ಬಗ್ಗೆ ಮತ್ತು ಅದಕ್ಕೆ ಸೊಹ್ರಾಬುದ್ದೀನ್ ಪ್ರಕರಣದ ಜತೆ ನಂಟು ಇರಬಹುದು ಎಂಬ ಬಗ್ಗೆ ಲೋಯ ಸಹೋದರಿ ಅನುಮಾನ ವ್ಯಕ್ತಪಡಿಸಿದ್ದು ಕಳೆದ ವರ್ಷ ಮಾಧ್ಯಮದಲ್ಲಿ ವರದಿಯಾಗಿತ್ತು. ಹೀಗಾಗಿ ಈ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ.</p><p>ಸೊಹ್ರಾಬುದ್ದೀನ್ ಶೇಖ್, ಅವರ ಪತ್ನಿ ಕೌಸರ್ ಬಿ ಮತ್ತು ಸಹವರ್ತಿ ತುಳಸಿದಾಸ್ ಪ್ರಜಾಪತಿಯನ್ನು 2005ರ ನವೆಂಬರ್ನಲ್ಲಿ ಗುಜರಾತ್ನಲ್ಲಿ ನಕಲಿ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಒಟ್ಟು 23 ಆರೋಪಿಗಳಿದ್ದಾರೆ. ಪ್ರಕರಣವನ್ನು ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.</p><p>ಲೋಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ವಕೀಲರ ಸಂಘ ಕೂಡ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.</p><p> </p></p>