‘ಡಿ.20 ಮತ್ತು 21 ರಂದು ಅಹೋರಾತ್ರಿ ಧರಣಿಯನ್ನು ನಡೆಸಿದಾಗ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ.ರೂಪಾ ವಾರದಲ್ಲಿ ನಾಲ್ಕು ದಿನ (ಭಾನುವಾರದಿಂದ ಮಂಗಳವಾರದ ವರೆಗೂ) ಹಾಗೂ ಪ್ರತಿ ಅಮಾವಾಸ್ಯೆ ಸಂದರ್ಭದಲ್ಲಿ ನಾಲ್ಕುದಿನ, ಹುಣ್ಣಿಮೆಯ ವೇಳೆ ಮೂರು ದಿನ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಬಳಿಕ ಪ್ರತಿಭಟನೆ ಹಿಂಪಡೆದಿದ್ದವು. ಆದರೆ, ಈಗ ದಿಢೀರನೆ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ದೇವಸ್ಥಾನದ ಭದ್ರತಾ ಸಿಬ್ಬಂದಿ ವ್ಯಾಪಾರಿ ಮಹಿಳೆಯರ ಮೇಲೆ ದೌರ್ಜನ್ಯವನ್ನೂ ಎಸಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.