ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಕಳಪೆ; ಗ್ರಾಮಸ್ಥರ ಆರೋಪ

Last Updated 16 ಜನವರಿ 2018, 9:44 IST
ಅಕ್ಷರ ಗಾತ್ರ

ಕುಶಾಲನಗರ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಹಾರಂಗಿ ಜಲಾಶಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಾವೇರಿ ನೀರಾವರಿ ನಿಗಮ ₹ 70 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗುಮ್ಮನಕೊಲ್ಲಿಯಿಂದ ಗೋಪಾಲ್ ಸರ್ಕಲ್ ವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿತ್ತು. ಆದರೆ, ರಸ್ತೆ ಡಾಂಬರೀಕರಣಗೊಂಡ ಒಂದೇ ವಾರದಲ್ಲಿ ಜಲ್ಲಿಕಲ್ಲುಗಳು ಮೇಲೆದ್ದಿವೆ. ವಾಹನಗಳ ಚಲಿಸುವಾಗ ರಸ್ತೆಯಲ್ಲಿರುವ ಜಲ್ಲಿ ಕಲ್ಲುಗಳು ಏಳುತ್ತಿವೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ಗ್ರಾಮದ ಮುಖಂಡ ರಾಘವೇಂದ್ರ ದೂರಿದ್ದಾರೆ.

ನೀರಾವರಿ ಇಲಾಖಾಧಿಕಾರಿಗಳು ರಸ್ತೆಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು. ಉತ್ತಮ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT