ಬಂಗಾರಪೇಟೆ: ತಡೆಯಾಜ್ಞೆ ಉಲ್ಲಂಘಿಸಿ ರಾತ್ರೋ ರಾತ್ರಿ ಪಟ್ಟಣದ ಚೆಕ್ಪೋಸ್ಟ್ ಬಳಿ ಇರುವ ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟಿಸಿ, ಮಾಲಾರ್ಪಣೆ ಮಾಡಲಾಗಿದೆ. ಶಾಸಕರ ಬೆಂಬಲಿಗರೇ ಪ್ರತಿಮೆ ಉದ್ಘಾಟಿಸಿದ್ದಾರೆ ಎನ್ನುವ ಮಾತುಗಳು ನಗರದಲ್ಲಿ ವ್ಯಾಪಕವಾಗಿದೆ. ಆದರೆ ಈ ಕುರಿತು ಅಧಿಕೃತವಾಗಿ ಮಾತನಾಡಲು ಯಾರೂ ಮುಂದೆ ಬರುತ್ತಿಲ್ಲ.